ಬೆಂಗಳೂರು: ಸಾರಿಗೆ ನೌಕರರಿಗೆ ಪ್ರೀ ವೈದ್ಯಕೀಯ ಸೇವೆ ಒದಗಿಸುವ ಯೋಜನೆಯನ್ನು ರಾಜ್ಯ ಸರ್ಕಾರ ಜನವರಿ ಮೊದಲ ವಾರದಲ್ಲಿ ಜಾರಿಗೆ ತರಲು ಆದೇಶ ನೀಡಲಿದೆ.

ಈ ಸ್ಕೀಮನಲ್ಲಿ , ಚಾಲಕರು, ಕಂಡಕ್ಟರ್ಗಳು ಮತ್ತು ಅವರ ಕುಟುಂಬದ ಸದಸ್ಯರು ರಾಜ್ಯದಾದ್ಯಂತ 240 ಆಸ್ಪತ್ರೆಗಳಲ್ಲಿ ಪ್ರೀ ಚಿಕಿತ್ಸೆ ಪಡೆಯಲು ಎಲ್ಲಾ ರೀತಿಯ ಸೌಲಭ್ಯಗಳು ಸಿಗಲಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಯೋಜನೆಯಡಿ ನೌಕರರಿಗೆ “ಕಾರ್ಡ್
ನಗದು ರಹಿತ ಚಿಕಿತ್ಸಾ ಸೌಲಭ್ಯ ಒದಗಿಸುವಂತೆ ಮನವಿಗಳು ಬಂದಿದ್ದವು. ಹೀಗಾಗಿ ಸರ್ಕಾರ ಸಾರಿಗೆ ನೌಕರರ ಅನುಕೂಲಕ್ಕಾಗಿ ಹಲವು ಹೊಸ ಉಪಕ್ರಮಗಳನ್ನು ಪರಿಚಯಿಸುತ್ತಿದೆ. ಈ ಯೋಜನೆಯಡಿ ನೌಕರರಿಗೆ “ಕಾರ್ಡ್” ನೀಡಲಾಗುವುದು, ಕಾರ್ಡ್ ಮೂಲಕ ರಾಜ್ಯದಾದ್ಯಂತ 240 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಹಣ ಪಾವತಿಸಬೇಕಾಗಿಲ್ಲ ಎಂದು ಹೇಳಿದರು.
ಈ ಮೊದಲು ನೌಕರರು ಚಿಕಿತ್ಸೆಗೆ ಮೊದಲು ಹಣವನ್ನು ಪಾವತಿ ಮಾಡಬೇಕಿತ್ತು. ನಂತರ ಹಣವನ್ನು ಮರುಪಾವತಿ ಮಾಡಲಾಗುತ್ತಿತ್ತು. ಯೋಜನೆಯಡಿ ಇದೀಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಗೊತ್ತುಪಡಿಸಿದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ “ಕಾರ್ಡ್” ಮೂಲಕ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.
ಯೋಜನೆಯನ್ನು ಮೊದಲು ಕೆಎಸ್ಆರ್ಟಿಸಿ ನೌಕರರಿಗೆ ಪರಿಚಯಿಸಲಾಗುವುದು. ನಂತರ ಬಿಎಂಟಿಸಿ, ಕೆಕೆಆರ್ಟಿಸಿ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಗೂ ವಿಸ್ತರಿಸಲಾಗುವುದು ಎಂದು ತಿಳಿಸಿದರು.
ಪರಿಹಾರದ ಮೊತ್ತ 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಳ:
ಬಿಎಂಟಿಸಿಯ ಅಧಿಕಾರಿಗಳು ಮತ್ತು ಇತರ ಉದ್ಯೋಗಿಗಳ ಕುಟುಂಬಗಳ ಆರ್ಥಿಕ ಭದ್ರತೆಯನ್ನು ಹೆಚ್ಚಿಸಲು, ಸಮೂಹ ವಿಮಾ ಯೋಜನೆಯಡಿ ಪರಿಹಾರವನ್ನು ಪರಿಷ್ಕರಿಸಲಾಗಿದೆ. ಫೆಬ್ರವರಿ 19, 2024 ರಿಂದ, ಅನಾರೋಗ್ಯ ಅಥವಾ ಇತರ ಕಾರಣಗಳಿಂದ ತಮ್ಮ ಜೀವನವನ್ನು ಕಳೆದುಕೊಳ್ಳುವ ಉದ್ಯೋಗಿಗಳಿಗೆ ಪರಿಹಾರದ ಮೊತ್ತವನ್ನು 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಒಟ್ಟಾರೆಯಾಗಿ ಈವರೆಗೆ 1.70 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ. ಹದಿನೇಳು ಮಂದಿ ನೌಕರರಿಗೆ ತಲಾ 10 ಲಕ್ಷ ರೂ.ಗಳನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದರು.





